Ezekiel (24/48)  

1. ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
2. ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
3. ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.
4. ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ;
5. ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.
6. ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.
7. ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
8. ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ;
9. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
10. ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ.
11. ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
12. ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;
13. ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
14. ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
15. ಇದಲ್ಲದೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
16. ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
17. ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
18. ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನ ರೊಂದಿಗೆ ಮಾತನಾಡಿದೆನು; ಸಂಜೆ ನನ್ನ ಹೆಂಡತಿ ಸತ್ತಳು; ಆಗ ಮುಂಜಾನೆ ಅಪ್ಪಣೆಯಾದ ಪ್ರಕಾರವೇ ನಾನು ಮಾಡಿದೆನು.
19. ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು.
20. ಆಮೇಲೆ ನಾನು ಅವರಿಗೆ ಉತ್ತರಿಸಿದೆನು; ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
21. ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
22. ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು.
23. ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ.
24. ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ.
25. ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ
26. ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?
27. ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.

  Ezekiel (24/48)