← 2Timothy (2/4) → |
1. | ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು. |
2. | ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು. |
3. | ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು. |
4. | ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ. |
5. | ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ. |
6. | ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು. |
7. | ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ. |
8. | ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ. |
9. | ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. |
10. | ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ. |
11. | ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು. |
12. | ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು. |
13. | ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು. |
14. | ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು. |
15. | ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು. |
16. | ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು. |
17. | ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ; |
18. | ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ. |
19. | ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು. |
20. | ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ. |
21. | ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು. |
22. | ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು. |
23. | ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. |
24. | ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು. |
25. | ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು. |
26. | ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು. |
← 2Timothy (2/4) → |