← Ecclesiastes (12/12) |
1. | ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ. |
2. | ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಕತ್ತಲಾಗದಿರುವಾಗಲೇ ಮಳೆಯ ಮೋಡ ಗಳು ತಿರಿಗಿ ಬರುವದಕ್ಕಿಂತ ಮುಂಚೆಯೇ ಆತನನ್ನು ಸ್ಮರಿಸು. |
3. | ಆ ದಿನದಲ್ಲಿ ಮನೆ ಕಾಯುವವರು ನಡುಗು ವರು; ಬಲವಾದ ಮನುಷ್ಯರು ತಾವಾಗಿಯೇ ಬೊಗ್ಗು ವರು; ಅರೆಯುವವರು ಸ್ವಲ್ಪ ಇರುವದರಿಂದ ಸುಮ್ಮನಿ ರುವರು; ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು. |
4. | ಅರೆಯುವ ಶಬ್ದವು ಕಡಿಮೆಯಾ ದಾಗ ಬೀದಿಯಲ್ಲಿ ಬಾಗಲುಗಳು ಮುಚ್ಚಿರುವವು. ಅವನು ಪಕ್ಷಿಯ ಶಬ್ದವಾದಾಗ ಎದ್ದೇಳುವನು. ಗಾನದ ಕುಮಾರ್ತೆಯರೆಲ್ಲಾ ಕುಗ್ಗುವರು. |
5. | ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು. |
6. | ಬೆಳ್ಳಿಯ ಸರಿಗೆ ಬಿಚ್ಚಲ್ಪಡುವದು; ಇಲ್ಲವೆ ಬಂಗಾರದ ಬಟ್ಟಲು ಒಡೆದು ಹೋಗುವದು. ಮಣ್ಣಿನ ಮಡಿಕೆಯು ಬುಗ್ಗೆಯ ಬಳಿಯಲ್ಲಿ ಒಡೆದು ಹೋಗುವದು. ಇಲ್ಲವೆ ಕೊಳದ ಹತ್ತಿರ ರಾಟೆ ಮುರಿಯುವದು. |
7. | ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು. |
8. | ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು. |
9. | ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು. |
10. | ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು. |
11. | ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ. |
12. | ಕೊನೆಗೆ ನನ್ನ ಮಗನೇ, ಇವುಗಳಿಂದ ಎಚ್ಚರಿಕೆ ಯಾಗಿರು. ಬಹಳ ಪುಸ್ತಕಗಳನ್ನು ಮಾಡುವದಕ್ಕೆ ಅಂತ್ಯ ವಿಲ್ಲ; ಹೆಚ್ಚು ಅಭ್ಯಾಸವು ಶರೀರಕ್ಕೆ ಆಯಾಸವಾಗಿದೆ. |
13. | ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ. |
14. | ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು. |
← Ecclesiastes (12/12) |