← Jeremiah (29/52) → |
1. | ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ |
2. | ಪ್ರವಾದಿ ಯಾದ ಯೆರೆವಿಾಯನು ಸೆರೆಯಲ್ಲಿರುವ ಹಿರಿಯರ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲಿಗೆ ಒಯ್ದ ಜನರೆಲ್ಲರಿಗೆ |
3. | ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ-- |
4. | ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಯೆರೂಸಲೇಮಿನಿಂದ ಬಾಬೆಲಿಗೆ ತಾನು ಸೆರೆಯಾಗಿ ಸಾಗಿಸಿದವರಿಗೆ ಹೇಳುವದೇನಂದರೆ-- |
5. | ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು ಅವುಗಳ ಫಲವನ್ನು ತಿನ್ನಿರಿ; ಹೆಂಡತಿಯರನ್ನು ತಕ್ಕೊಂಡು ಕುಮಾರ ಕುಮಾರ್ತೆಯರನ್ನು ಪಡೆಯಿರಿ; |
6. | ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ. |
7. | ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು. |
8. | ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ. |
9. | ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ. |
10. | ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು. |
11. | ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ. |
12. | ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. |
13. | ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ. |
14. | ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು. |
15. | ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ |
16. | ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ-- |
17. | ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು. |
18. | ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು. |
19. | ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ ಎಂದು ಕರ್ತನು ಅನ್ನುತ್ತಾನೆ; ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಗಿನಲ್ಲಿಯೇ ಕಳುಹಿಸಿದೆನು; ಆದರೆ ನೀವು ಕೇಳಲಿಲ್ಲವೆಂದು ಕರ್ತನು ಅನ್ನುತ್ತಾನೆ. |
20. | ಆದದ ರಿಂದ ನಾನು ಯೆರೂಸಲೇಮಿ ನಿಂದ ಬಾಬೆಲಿಗೆ ಕಳುಹಿಸಿದ ಸೆರೆಯವರೆಲ್ಲರೇ, |
21. | ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು. |
22. | ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು |
23. | ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ. |
24. | ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು-- |
25. | ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ? |
26. | ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ. |
27. | ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನ ವನಾದ ಯೆರೆವಿಾಯನನ್ನು ನೀನು ಯಾಕೆ ಗದರಿಸ ಲಿಲ್ಲ? |
28. | ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ. |
29. | ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು. |
30. | ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ-- |
31. | ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣ |
32. | ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ. |
← Jeremiah (29/52) → |