← John (6/21) → |
1. | ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು. |
2. | ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು. |
3. | ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕೂತು ಕೊಂಡನು. |
4. | ಆಗ ಯೆಹೂದ್ಯರ ಪಸ್ಕ ಹಬ್ಬವು ಸವಿಾಪವಾಗಿತ್ತು. |
5. | ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು. |
6. | ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು. |
7. | ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು. |
8. | ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ-- |
9. | ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು. |
10. | ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು. |
11. | ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು. |
12. | ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು. |
13. | ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು. |
14. | ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು. |
15. | ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು. |
16. | ಸಾಯಂಕಾಲವಾದಾಗ ಆತನ ಶಿಷ್ಯರು ಸಮುದ್ರಕ್ಕೆ ಹೊರಟುಹೋಗಿ |
17. | ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು , ಯೇಸು ಅವರ ಬಳಿಗೆ ಬಂದಿರಲಿಲ್ಲ. |
18. | ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು. |
19. | ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು. |
20. | ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು. |
21. | ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು. |
22. | ಆತನ ಶಿಷ್ಯರು ಹತ್ತಿದ ಒಂದೇ ದೋಣಿಯ ಹೊರತು ಮತ್ತೊಂದು ಅಲ್ಲಿ ಇರಲಿಲ್ಲವೆಂದೂ ಆತನ ಶಿಷ್ಯರು ಮಾತ್ರ ಹೋದರೆಂದೂ ಯೇಸು ತನ್ನ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಮರು ದಿನ ಸಮುದ್ರದ ಆಚೆಯಲ್ಲಿ ನಿಂತಿದ್ದ ಜನರು ನೋಡಿ ದ್ದರು. |
23. | (ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು). |
24. | ಆಗ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವದನ್ನು ಜನರು ನೋಡಿ ಅವರು ಸಹ ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು. |
25. | ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು. |
26. | ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ. |
27. | ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು. |
28. | ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ |
29. | ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು. |
30. | ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ? |
31. | ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು. |
32. | ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ. |
33. | ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು. |
34. | ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು. |
35. | ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ. |
36. | ಆದರೆ--ನೀವು ನನ್ನನ್ನು ನೋಡಿಯೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳಿದೆನು. |
37. | ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ. |
38. | ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು. |
39. | ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ. |
40. | ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು. |
41. | ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ-- |
42. | ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು. |
43. | ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಿಮ್ಮ ನಿಮ್ಮೊಳಗೆ ಗುಣುಗುಟ್ಟ ಬೇಡಿರಿ. |
44. | ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. |
45. | ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ. |
46. | ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ. |
47. | ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. |
48. | ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ. |
49. | ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು. |
50. | ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ. |
51. | ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು. |
52. | ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು. |
53. | ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. |
54. | ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. |
55. | ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. |
56. | ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. |
57. | ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು. |
58. | ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು. |
59. | ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು. |
60. | ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು. |
61. | ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ? |
62. | ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ? |
63. | ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ. |
64. | ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು. |
65. | ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು. |
66. | ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ. |
67. | ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು |
68. | ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ. |
69. | ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು. |
70. | ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು. |
71. | ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು. |
← John (6/21) → |