← Matthew (27/28) → |
1. | ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು. |
2. | ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು. |
3. | ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು |
4. | ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು. |
5. | ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು. |
6. | ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು. |
7. | ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು. |
8. | ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ. |
9. | ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು |
10. | ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು. |
11. | ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು. |
12. | ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ. |
13. | ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು. |
14. | ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು. |
15. | ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು. |
16. | ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು. |
17. | ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು. |
18. | ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು. |
19. | ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು. |
20. | ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು. |
21. | ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು. |
22. | ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು. |
23. | ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು. |
24. | ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು. |
25. | ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು. |
26. | ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು. |
27. | ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು. |
28. | ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು. |
29. | ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು. |
30. | ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು. |
31. | ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು. |
32. | ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು. |
33. | ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು. |
34. | ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು. |
35. | ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ |
36. | ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು. |
37. | ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು. |
38. | ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು. |
39. | ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ-- |
40. | ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು. |
41. | ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ-- |
42. | ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; |
43. | ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು. |
44. | ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು. |
45. | ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು. |
46. | ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. |
47. | ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು. |
48. | ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು. |
49. | ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು. |
50. | ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು. |
51. | ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು; |
52. | ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು. |
53. | ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. |
54. | ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು |
55. | ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. |
56. | ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು. |
57. | ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು. |
58. | ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು. |
59. | ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ |
60. | ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು. |
61. | ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು. |
62. | ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು-- |
63. | ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ. |
64. | ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ |
65. | ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು. |
66. | ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು. |
← Matthew (27/28) → |